ಮೊಬೈಲ್ ಖದೀಮರ ಚೇಸ್ ಮಾಡಿ ಹಿಡಿದ ಪೊಲೀಸರು

ಶನಿವಾರ, 29 ಆಗಸ್ಟ್ 2020 (13:33 IST)
ಬೆಂಗಳೂರು: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬನ ಮೊಬೈಲ್ ಕಸಿದು ಪರಾರಿಯಾಗಲೆತ್ನಿಸಿದ ಖದೀಮರನ್ನು ಪೊಲೀಸರು ಬೆನ್ನಟ್ಟಿ ಹಿಡಿದ ಘಟನೆ ನಗರದಲ್ಲಿ ನಡೆದಿದೆ.


ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಗಳು ಮೊಬೈಲ್ ಕಸಿಯಲು ವ್ಯಕ್ತಿಯ ಮೇಲೆ ಹಲ್ಲೆಯನ್ನೂ ನಡೆಸಿದ್ದರು. ಬಂಬೂ ಬಜಾರ್ ಬಳಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪುಲಕೇಶಿ ನಗರದ ಸಂಚಾರಿ ಪೊಲೀಸ್ ಠಾಣೆಯ ಕಾನ್ಸಟೇಬಲ್ ಗಳು ಆರೋಪಿಗಳನ್ನು ಚೇಸ್ ಮಾಡಿ ಸೆರೆಹಿಡಿದಿದ್ದಾರೆ. ಪೊಲೀಸರ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ