ಚಾರ್ಮಾಡಿ ಘಾಟ್ ರಸ್ತೆ ಸಂಚಾರಕ್ಕೆ ಪೊಲೀಸರಿಂದ ಅಡ್ಡಿ

ಭಾನುವಾರ, 15 ಸೆಪ್ಟಂಬರ್ 2019 (10:35 IST)
ಚಿಕ್ಕಮಗಳೂರು : ಭಾರಿ ಮಳೆ ಮತ್ತು ಗುಡ್ಡ ಕುಸಿತದಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.


ಡಿಸಿ ಆದೇಶವಿದ್ದರೂ ವಾಹನಗಳ ಸಂಚಾರಕ್ಕೆ ಪೊಲೀಸರು ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. ಡಿಸಿಯಿಂದ ನಮಗೆ ಯಾವುದೇ ರೀತಿಯ ಆದೇಶ ಬಂದಿಲ್ಲ. ಹೀಗಾಗಿ ವಾಹನ ಸಂಚಾರಕ್ಕೆ ಅನುಮತಿ ನೀಡುವುದಿಲ್ಲ ಎಂದು ವಾಹನ ಸವಾರರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

 

ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆ ಮಧ್ಯ ಸಮನ್ವಯ ಕೊರತೆಯಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಪೊಲೀಸರ ವಿರುದ್ಧ ವಾಹನ ಸವಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ