ಖ್ಯಾತ ಸಾಹಿತಿ ಅನಂತಮೂರ್ತಿ ನಿಧನಕ್ಕೆ ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದ ಬಿಜೆಪಿ ಮತ್ತು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ವಿರುದ್ದ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ಪೊಲೀಸರು ಕೆಲವು ಅಪರಿಚಿತ ಬಿಜೆಪಿ ಮತ್ತು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಕೇಸು ದಾಖಲಿಸಿದರು.