ಗೌರಿ ಲಂಕೇಶ್ ಹಂತಕರ ಪತ್ತೆಗೆ ಪೊಲೀಸರ ತಂತ್ರ

ಭಾನುವಾರ, 10 ಸೆಪ್ಟಂಬರ್ 2017 (13:09 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಂತಕರನ್ನು ಪತ್ತೆಹಚ್ಚಲು ಪೊಲೀಸರು ಶತಾಯಗತಾಯ ಯತ್ನಿಸುತ್ತಿದ್ದು, ಪ್ರಕರಣದ ಮರುಸೃಷ್ಟಿ ಮಾಡಿದ್ದಾರೆ.

 
ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಗಳು ಅಸ್ಪಷ್ಟವಾಗಿರುವ ಕಾರಣ, ಎಸ್ಐಟಿ ಅಧಿಕಾರಿಗಳು ಘಟನೆಯ ಮರುಸೃಷ್ಟಿ ಮಾಡಿ ಮತ್ತಷ್ಟು ಸುಳಿವು ಪಡೆಯುವ ಯತ್ನ  ನಡೆಸಿದ್ದಾರೆ.

ಈ ನಡುವೆ ಗೌರಿ ಲಂಕೇಶ್ ಹತ್ಯೆ ಕುರಿತಾಗಿ ಪ್ರತಿಭಟನೆ ನಡೆಸುತ್ತಿರುವ ವಿಚಾರವಾದಿ ನಾಯಕರು ಹಂತಕರ ಬಂಧನಕ್ಕೆ ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ನಟ ಚೇತನ್, ಗೌರಿ ಲಂಕೇಶ್ ಹತ್ಯೆ ಒಂದು ಭಯೋತ್ಪಾದಕ ಕೃತ್ಯ. ಗೌರಿ ಲಂಕೇಶ್ ರಿಂದ ಹಲವು ವಿಚಾರಗಳನ್ನು ಕಲಿತಿದ್ದೇನೆ. ನಮಗೆ ನ್ಯಾಯ ಬೇಕು. ಹಂತಕರನ್ನು ಶೀಘ್ರದಲ್ಲೇ ಬಂಧಿಸಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ.. ಆಸೀಸ್ ಸರಣಿಗೆ ರವಿಚಂದ್ರನ್ ಅಶ್ವಿನ್ ಗೇ ಕೊಕ್ ಕೊಡುತ್ತಾ ಬಿಸಿಸಿಐ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ