ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾನ್ಯತೆಯೇ ಪಡೆಯದ ಸಂಘಟನೆ ರಾಜ್ಯದ್ಯಂತ ಪೊಲೀಸ ಪ್ರತಿಭಟನೆಗೆ ಕರೆ ನೀಡಿದೆ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಸಾರ್ವಜನಿಕರ ಆಸ್ತಿ, ಮಾನ, ಪ್ರಾಣ ಕಾಪಾಡುವಂತಹ ಮಹತ್ವದ ಜವಾಬ್ದಾರಿ ಇರುವಂತಹ ಇಲಾಖೆ. ಇಂತಹ ಶಿಸ್ತಿನ ಇಲಾಖೆ ಅಶಿಸ್ತಿನಿಂದ ವರ್ತಿಸಬಾರದು ಎಂದು ಸಲಹೆ ನೀಡಿದರು.
ಒಂದು ವೇಳೆ, ರಾಜ್ಯ ಪೊಲೀಸರು ಸಾಮೂಹಿಕ ರಜೆ ಹಾಕುವ ಮೂಲಕ ಜೂನ್ 4 ರಂದು ಪ್ರತಿಭಟನೆ ಕೈಕೊಂಡರೆ, ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.