ರಾಜ್ಯದ ಇತಿಹಾಸದಲ್ಲಿ ಪ್ರಪ್ರಥಮ ಭಾರಿಗೆ ಪೊಲೀಸರು ಕೈಗೊಂಡಿದ್ದ ಪ್ರತಿಭಟನೆಯನ್ನು ರಾಜ್ಯ ಸರಕಾರ ಹತ್ತಿಕ್ಕಲು ಪ್ರಯತ್ನಿಸಿದ್ದು, ಕಳೆದ ಎರಡು ದಿನದ ಹಿಂದೆ ಪ್ರತಿಭಟನೆಗೆ ಕರೆ ನೀಡಿದ್ದ ಶಶಿಧರ್ ಅವರನ್ನು ಬಂಧಿಸಿ 14 ದಿನಗಳವರೆಗೂ ನ್ಯಾಯಾಂಗ ವಶಕ್ಕೆ ಪಡೆಯಲಾಗಿತ್ತು.
ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಪೊಲೀಸ್ ಕ್ವಾಟರ್ಸ್ನಲ್ಲಿರುವ ಪೊಲೀಸ್ ಕುಟುಂಬಗಳು ಪ್ರತಿಭಟನೆಯಲ್ಲಿ ಭಾಗಿಯಾದರೆ ಅವರ ಕ್ವಾಟರ್ಸ್ನ್ನು ಖಾಲಿ ಮಾಡಿಸುವುದಲ್ಲದೇ ಅವರನ್ನು ಸೇವೆಯಿಂದ ವಜಾಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.