ಸುಮಾರು 70ಕ್ಕೂ ಹೆಚ್ಚು ರೌಡಿಗಳ ಮನೆಗಳ ಮೇಲೆ ಬೆಂಗಳೂರಿನಲ್ಲಿ ಪೊಲೀಸರು ದಾಳಿ ನಡೆಸಿದ್ದು,, ರೌಡಿ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ರೌಡಿ ಚಟುವಟಿಕೆಯನ್ನು ನಿಯಂತ್ರಿಸುವುದಕ್ಕಾಗಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ರೌಡಿಗಳನ್ನು ಭೇಟಿ ಮಾಡಿ, ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬದುಕುವಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹಿತವಚನ ಹೇಳಿದರು.
ಜಯನಗರ, ಕಂಪೇಗೌಡ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಲಾಯಿತು. ಸಮಾಜಘಾತುಕ ಚಟುವಟಿಕೆಯಲ್ಲಿ ನಿರತರಾಗದಂತೆ ಎಚ್ಚರಿಕೆ ನೀಡಿದರು. ರೌಡಿಗಳಂತೆ ತೋರಿಸಿಕೊಳ್ಳಲು ಮೈಗೆ ಹಚ್ಚೆ ಹಾಕಿಸಿಕೊಳ್ಳುವ, ಕೂದಲನ್ನು ಬಿಡುವ ಹವ್ಯಾಸವನ್ನು ತ್ಯಜಿಸುವಂತೆ ಅವರು ಸಲಹೆ ನೀಡಿದರು.