ಹಣ ಸಾಗಿಸುತ್ತಿದ್ದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾರು ಜಪ್ತಿ?

ಶುಕ್ರವಾರ, 7 ಏಪ್ರಿಲ್ 2017 (18:44 IST)
ಉಪಚುನಾವಣೆಯಲ್ಲಿ ಹಣ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ಮಾಜಿ ಸಚಿವ ರೇಣುಕಾಚಾರ್ಯ ಅವರದ್ದೆನ್ನಲಾದ ಕಾರನ್ನು ಪೊಲೀಸರು ಜಪ್ತಿ ಮಾಡಿ 2 ಲಕ್ಷ 96 ಸಾವಿರ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.
 
ಗುಂಡ್ಲುಪೇಟೆಯಿಂದ ನಂಜನಗೂಡಿಗೆ ತೆರಳುತ್ತಿರುವಾಗ ಬೇಗೂರು ಚೆಕ್‌‍ಪೋಸ್ಟ್‌ನಲ್ಲಿ ರೇಣುಕಾಚಾರ್ಯ ಅವರ ಸ್ಕಾರ್ಪಿಯೋ ಕಾರಿನಲ್ಲಿದ್ದ 2 ಲಕ್ಷ 96 ಸಾವಿರ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಆರೋಪಿಗಳನ್ನು ವಶಕ್ಕೆ ಬಂಧಿಸಿದ್ದಾರೆ.
 
ಪೊಲೀಸರು ಕಾರು ಜಪ್ತಿ ಮಾಡಿ ಹಣ ವಶಕ್ಕೆ ಪಡೆದಿದ್ದಾರೆ. ಕಾರು ನನ್ನದಲ್ಲ ಎಂದು ರೇಣುಕಾಚಾರ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸುತ್ತಿದ್ದ ಬಿಜೆಪಿ ನಾಯಕರಿಗೆ, ಇದೀಗ ಬಿಜೆಪಿ ಮುಖಂಡ ಮಾಜಿ ಸಚಿವ ರೇಣುಕಾಚಾರ್ಯ ಹಣ ಹಂಚಲು ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಪೊಲೀಸರಿಗೆ ಸಿಕ್ಕುಬಿದ್ದಿರುವುದು ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ