ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ
ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಆದೇಶ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಸಾರ್ವಜನಿಕರು, ಸಮಾಜ ಸೇವಕರು ಮತ್ತು ಒಂದು ಸಮುದಾಯದ ಸಂಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಗಳ ಮನೆಗಳಿಗೆ ಪೊಲೀಸರು ಯಾವುದೇ ಅಪರಾಧದ ಹಿನ್ನೆಲೆ, ಎಫ್ಐಆರ್, ವಾರೆಂಟ್ ಅಥವಾ ಕಾನೂನು ದಾಖಲೆ ನೀಡದೆ ಕಾನೂನು ಬಾಹಿರವಾಗಿ ರಾತ್ರಿ 11 ಗಂಟೆ ನಂತರ ಭೇಟಿ ನೀಡಿದ್ದಾರೆ.