ರಾಜಕೀಯ ಮೀಸಲಾತಿಯನ್ನು ಸಿರಿವಂತರೇ ಅನುಭವಿಸುತ್ತಿದ್ದಾರೆ - ಸಚಿವ ಕೆಎಸ್ ಈಶ್ವರಪ್ಪ

ಗುರುವಾರ, 25 ಫೆಬ್ರವರಿ 2021 (12:11 IST)
ವಿಜಯಪುರ : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲ ಇಲಾಖೆಗಳು ನಿರೀಕ್ಷೆ ಮೀರಿ ಕೆಲಸ ಮಾಡುತ್ತಿವೆ ಎಂದು ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಮೀಸಲಾತಿ ಹೋರಾಟವನ್ನು ನಾನು ಸ್ವಾಗತ ಮಾಡುತ್ತೇನೆ. ಆದರೆ ಉಳ್ಳವರೇ ಮೀಸಲಾತಿಯನ್ನು ಅನುಭವಿಸುತ್ತಿದ್ದಾರೆ. ರಾಜಕೀಯ ಮೀಸಲಾತಿಯನ್ನು ಸಿರಿವಂತರೇ ಅನುಭವಿಸುತ್ತಿದ್ದಾರೆ. ಅಪ್ಪ ಎಂಪಿ, ಮಗ ಸಾಸಕನಾಗುತ್ತಿದ್ದಾನೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹಿಂದ ಸಮಾವೇಶ ನಡೆಸುವ ವಿಚಾರ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿ ಹೋಯಿತು. ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಸೋತರೂ ಬುದ್ದಿ ಬರಲಿಲ್ಲ. ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಹೇಳಿಕೊಳ್ತಾರೆ. ಆದ್ರೆ ಕಾಂಗ್ರೆಸ್ ನ ಯಾವ ನಾಯಕನೂ ಇದನ್ನ ಹೇಳ್ತಿಲ್ಲ ಎಂದು ಅವರು ಟಾಂಗ್ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ