ರಾಜಕಾರಣ ನಿಂತ ನೀರಲ್ಲ- ಬೊಮ್ಮಾಯಿ

ಸೋಮವಾರ, 11 ಸೆಪ್ಟಂಬರ್ 2023 (20:00 IST)
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್​​​ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ.. ಮತ್ತೊಂದೆಡೆ ಕಾಂಗ್ರೆಸ್​ ನಾಯಕರು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ.. ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿಗೆ ಹೋಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ