ಸುಮಲತಾ ಜತೆ ಕೈಪಡೆ ಮುಖಂಡರ ಭಾವಚಿತ್ರ; ಹೆಚ್ಚಿದ ಕುತೂಹಲ

ಶನಿವಾರ, 25 ಮೇ 2019 (17:49 IST)
ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್ ಗೆ ಅಭಿನಂದನೆ ಸಲ್ಲಿಸುವ ಪ್ಲೆಕ್ಸ್ ನಲ್ಲಿ  ಕಾಂಗ್ರೆಸ್ಸಿಗರ ಫೋಟೋಗಳು ರಾರಾಜಿಸುತ್ತಿವೆ.

ಮಂಡ್ಯ ನಗರದ ವಿವಿಧೆಡೆ ಅಳವಡಿಸಿರುವ ಪ್ಲೆಕ್ಸ್ ಗಳಲ್ಲಿ ನೂತನ ಸಂಸದೆ ಸುಮಲತಾ ಪರ ಅಳವಡಿಸಿರುವ ಪ್ಲೆಕ್ಸ್ ಗಳು ರಾರಾಜಿಸುತ್ತಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್, ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ ಸೇರಿ ಅನೇಕ ಕಾಂಗ್ರೆಸ್ಸಿಗರ ಫೋಟೋ ಅಳವಡಿಕೆ ಮಾಡಲಾಗಿದೆ.

ಮಂಡ್ಯ ಜನರಲ್ಲಿ ಈ ವಿಚಾರ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ನಾಯಕರ ಫೋಟೋಗಳು ರಾರಾಜಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇವ್ರ ಜೊತೆಗೆ ಮಂಡ್ಯ ಜಿಲ್ಲೆಯ ಪರಾಜಿತ ಅಭ್ಯರ್ಥಿಗಳ ಫೋಟೋಗಳು ಸಹ ರಾರಾಜಿಸುತ್ತಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ