ಹೃದಯಾಘಾತದಿಂದ ಸಾವನ್ನಪ್ಪಿದರೆ ಮರಣೋತ್ತರ ಪರೀಕ್ಷೆ ಕಡ್ಡಾಯ
ಹೃದಯದ ವಿಚಾರ ಪಠ್ಯದಲ್ಲಿ ಅಳವಡಿಕೆ, 15 ವರ್ಷದ ಮಕ್ಕಳಿಗೆ ಶಾಲೆಯಲ್ಲಿ ಹೃದಯ ಸೇರಿ ಆರೋಗ್ಯ ತಪಾಸಣೆ, ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹೃದಯಘಾತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲು ತೀರ್ಮಾನಿಸಲಾಗಿದೆ. ಆಸ್ಪತ್ರೆಯ ಹೊರಗೆ ಯಾರಾದರೂ ಹೃದಯಾಘಾತದಿಂದ ಸಾವನ್ನಪ್ಪಿದರೆ ಮರಣೋತ್ತರ ಪರೀಕ್ಷೆ ಕಡ್ಡಾಯ ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.