ಪ್ರಧಾನಿ ಮೋದಿ ವಿರುದ್ಧ ಪ್ರಕಾಶ್ ರೈ ಟೂತ್ ಪೇಸ್ಟ್ ಟಾಂಗ್

ಸೋಮವಾರ, 5 ಫೆಬ್ರವರಿ 2018 (10:11 IST)
ಬೆಂಗಳೂರು: ಪರಿವರ್ತನಾ ರ್ಯಾಲಿ ಉದ್ದೇಶಿಸಿ ನಿನ್ನೆ ಬೆಂಗಳೂರಿನಲ್ಲಿ ಮಾತನಾಡಿದ ಪ್ರಧಾನಿ ಮೋದಿಗೆ ಬಹುಭಾಷಾ ತಾರೆ ಪ್ರಕಾಶ್ ರೈ ಟ್ವಿಟರ್ ನಲ್ಲಿ ಕೆಣಕಿದ್ದಾರೆ.
 

2014 ರಲ್ಲಿ ಪ್ರಾಮಿಸ್ ಟೂತ್ ಪೇಸ್ಟ್ ಮಾರಿದರು. ಆದರೆ ಸಂಕಷ್ಟಕ್ಕೀಡಾಗಿರುವ ರೈತರ ಮತ್ತು ನಿರುದ್ಯೋಗಿಗಳ ಮೊಗದಲ್ಲಿ ನಗೆ ಮೂಡಿಸಲು ವಿಫಲರಾದರು’ ಎಂದು ಪ್ರಕಾಶ್ ರೈ ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಮತ್ತೆ ನಿನ್ನೆಯ ರ್ಯಾಲಿಯಲ್ಲಿ ಪ್ರಾಮಿಸ್ ಟೂತ್ ಪೇಸ್ಟ್ ಮಾರಲಾಗಿದೆ ಎಂದು ಪ್ರಧಾನಿ ಮೋದಿಗೆ ರೈ ಟಾಂಗ್ ಕೊಟ್ಟಿದ್ದಾರೆ. ನಿನ್ನೆ ನಡೆದ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ಭ್ರಷ್ಟಾಚಾರಗಳ ಬಗ್ಗೆ ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ