ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪ್ರಮೋದ್ ಮುತಾಲಿಕ್

ಮಂಗಳವಾರ, 18 ಜುಲೈ 2023 (14:08 IST)
ಬೆಳಗಾವಿ : ಕಾಂಗ್ರೆಸ್ ಸರ್ಕಾರ ಮುಜರಾಯಿ ಇಲಾಖೆಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದು, ಈ ನಿರ್ಧಾರವನ್ನ ನಾನು ಸ್ವಾಗತ ಮಾಡುತ್ತೇನಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.
 
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ ದೇವಸ್ಥಾನದ ಪವಿತ್ರತೆ ಉಳಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಅದರಂತೆ ಖಾಸಗಿ ದೇವಸ್ಥಾನಗಳಲ್ಲೂ ಕೂಡ ಮೊಬೈಲ್ ಬ್ಯಾನ್ ಮಾಡುವಂತೆ ವಿನಂತಿ ಮಾಡುತ್ತೇನೆ. ಜೊತೆಗೆ ಖಾಸಗಿ ದೇವಸ್ಥಾನದ ಆಡಳಿತ ಮಂಡಳಿಗೆ ನಮ್ಮೆಲ್ಲಾ ಕಾರ್ಯಕರ್ತರು ಮನವಿ ಕೊಡುತ್ತಾರೆಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ