ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣ; ಮೃತರ ಸಂಖ್ಯೆ 14 ಕ್ಕೆ ಏರಿಕೆ

ಸೋಮವಾರ, 17 ಡಿಸೆಂಬರ್ 2018 (14:55 IST)
ಚಾಮರಾಜನಗರ : ಸುಳ್ವಾಡಿಯ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಸಾವನ್ನಪ್ಪಿರುವ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.


ಮೈಲಿಬಾಯಿ (38) ಸುಳ್ವಾಡಿಯ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದು, ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೈಲಿಬಾಯಿ ಮೃತಪಟ್ಟಿದ್ದಾರೆ.


ಮೈಲಿ ಬಾಯಿ ಅವರ ಪತಿ ಕೃಷ್ಣನಾಯಕ್ ಅವರು ಮೊನ್ನೆಯಷ್ಟೇ ನಿಧನರಾಗಿದ್ದರು, ಮೈಲಿ ಬಾಯಿ ಅವರ ಮತ್ತೊಬ್ಬ ಪುತ್ರಿಯೂ ವಿಷ ಪ್ರಸಾದ ಸೇವನೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ