ರಾಜ್ಯ ರಾಜಕಾರಣದಲ್ಲಿ ಪ್ರತಾಪ ಸಿಂಹಗೆ ಉಜ್ವಲ ಭವಿಷ್ಯವಿದೆ: ಬಿ.ವೈ.ವಿಜಯೇಂದ್ರ‌‌

Sampriya

ಬುಧವಾರ, 27 ಮಾರ್ಚ್ 2024 (16:12 IST)
Photo Courtesy X
ಮಡಿಕೇರಿ: ರಾಜ್ಯ ರಾಜಕಾರಣದಲ್ಲಿ ಸಂಸದ ಪ್ರತಾಪಸಿಂಹ ಅವರಿಗೆ ಉಜ್ವಲ ಭವಿಷ್ಯ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಇಲ್ಲಿನ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಪ್ರತಾಪ್ ಸಿಂಹ ಅವರಿಗೆ  ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಟಿಕೆಟ್ ಕೈತಪ್ಪಿದೆ ಎಂದು ಭಾವಿಸಬಾರದು. ಅವರಿಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ ಎಂದರು.

ಇನ್ನೂ ಬಿಜೆಪಿಯ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಒಂದು ಜಾತಿಗೆ ಸೀಮಿತವಾಗಿಲ್ಲ. ಅವರು ಎಲ್ಲರೊಂದಿಗೆ ಬೆರೆತು, ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲಿದ್ದಾರೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ