ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯತೀಂದ್ರಗೆ ಪ್ರಶ್ನೆ ಮಾಡಿದ್ದಾರೆ. ಜಾತಿಗಣತಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು ಅಂತ ಮಾತನಾಡ್ತಿದ್ದಾರೆ? ಜಾತಿಗಣತಿಯನ್ನು ಲಿಂಗಾಯತರು ವಿರೋಧಿಸಿದರು. ರಾಜ್ಯದಲ್ಲಿ 39 ಲಿಂಗಾಯತ ಶಾಸಕರಿದ್ದಾರೆ. ಹಾಗಿದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡ್ತಾರಾ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯನವರು ಮೈಸೂರಿಗೆ 5 ರೂಪಾಯಿ ಕೆಲಸವನ್ನೂ ಮಾಡಿಲ್ಲ. ಜಾತಿಗಣತಿ ಎಲ್ಲಾ ಕುರ್ಚಿ ಉಳಿಸಿಕೊಳ್ಳುವ ನಾಟಕವಷ್ಟೇ. ಅಭಿವೃದ್ಧಿ ಎನ್ನುವುದು ಸಿದ್ದರಾಮಯ್ಯ ದೃಷ್ಟಿಕೋನದಲ್ಲೇ ಇಲ್ಲ ಎಂದಿದ್ದಾರೆ.