ಮರಾಠಿಗರಲ್ಲಿ ಕ್ಷಮೆ ಕೇಳಿದ ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್
ಮುಖ್ಯಮಂತ್ರಿಗಳು ಮರಾಠಿಗರಲ್ಲಿ ಕ್ಷಮೆ ಕೇಳುವುದರ ಅಗತ್ಯವೇನಿತ್ತು? ನಮ್ಮದು ಕನ್ನಡ ಭಾಷೆ ಎಂದು, ಕನ್ನಡದಲ್ಲೇ ಮಾತಾಡಬೇಕಿತ್ತು. ಮರಾಠಿಗರ ಕ್ಷಮೆ ಕೇಳಿ ಸಿಎಂ , ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಇದಕ್ಕೆ ಅವರು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಮುಖ್ಯಮಂತ್ರಿಗಳಿಗೆ ನಿಜವಾದ ಕನ್ನಡ ಪ್ರೇಮ ಇದ್ದಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.