ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ

geetha

ಮಂಗಳವಾರ, 23 ಜನವರಿ 2024 (17:26 IST)
ಬೆಂಗಳೂರು-ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ  ಜೆಪಿ ಭವನದಲ್ಲಿ ನಡೆಯಲಿದೆ.ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ  ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು,ಚಿಕ್ಕಬಳ್ಳಾಪುರ ಜಿಲ್ಲೆಯ ಒಂದೊಂದು ತಾಲ್ಲೂಕಿನ ಪ್ರತ್ಯೇಕ ಸಭೆ ನಿಖಿಲ್ ನಡೆಸಲಿದ್ದಾರೆ.ಚುನಾವಣಾ ಸಿದ್ಧತೆ & ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲು ಸಭೆ ನಡೆಸಲಿದ್ದು,ಸಭೆಯಲ್ಲಿ ಜಿಲ್ಲೆಯ ಹಾಲಿ, ಮಾಜಿ ಶಾಸಕರು, ಜಿಲ್ಲಾ & ತಾಲ್ಲೂಕು ಅಧ್ಯಕ್ಷರು, ಟಿಕೆಟ್ ಆಕಾಂಕ್ಷಿಗಳು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ.
 
ಮೈತ್ರಿ ನಂತ್ರ ಕ್ಷೇತ್ರದ ಜನರ ಮನಸ್ಥಿತಿ ಹೇಗಿದೆ ಅಂತ ಸಭೆಯಲ್ಲಿ ಮಾತುಕತೆ ನಡೆಸಲಿದ್ದಾರೆ.ಜೆಡಿಎಸ್‌ ಅಭ್ಯರ್ಥಿಯನ್ನ ಚಿಕ್ಕಬಳ್ಳಾಪುರದಿಂದ ಯಾರನ್ನ ಕಣಕ್ಕಿಳಿಸಬೇಕು.ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿದರೆ ಅವರಿಗೆ ಬೆಂಬಲ ಸೇರಿದಂತೆ ಕಾರ್ಯಕರ್ತರಲ್ಲಿ ಹೊಂದಾಣಿಕೆ ಸಮನ್ವಯತೆ ಬಗ್ಗೆಯೂ ಮುಖಂಡರೊಂದಿಗೆ ಹೆಚ್‌ಡಿ ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ