ರಾಘವೇಶ್ವರ ಶ್ರೀಗಳಿಗೆ ಬ್ಲಾಕ್ ಮೇಲ್ ಪ್ರಕರಣ: ಪ್ರೇಮಲತಾ- ದಿವಾಕರ್ ದಂಪತಿಗೆ ಕ್ಲೀನ್ ಚಿಟ್

ಬುಧವಾರ, 22 ಫೆಬ್ರವರಿ 2017 (14:08 IST)
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಲತಾ-ದಿವಾಕರ್ ದಂಪತಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ ಸಿಐಡಿ, ಹೊನ್ನಾವರ ಕೋರ್ಟ್`ಗೆ ಬಿ ರಿಪೋರ್ಟ್ ಸಲ್ಲಿಸಿದೆ.


3 ಕೋಟಿ ರೂಪಾಯಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಿ ಚಂದ್ರಶೇಖರ್ ಎಂಬುವವರು ದೂರು ನೀಡಿದ್ದರು. ಬಳಿಕ ಪ್ರಕರಣವನ್ನ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.  ಈ ಕುರಿತು ಖಾಸಗಿ ಚಾನಲ್ ಜೊತೆ ಹರ್ಷ ವ್ಯಕ್ತಪಡಿಸಿರುವ ಪ್ರೇಮಲತಾ ಸತ್ಯಕ್ಕೆ ಜಯ ಸಿಕ್ಕಿದೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ