ರಾಜ್ಯಕ್ಕೆ ಅವಧಿಪೂರ್ವ ಮುಂಗಾರು ಪ್ರವೇಶ: ಬೆಂಗಳೂರಿನಲ್ಲಿ ನೂರು ವರ್ಷಗಳ ದಾಖಲೆ ಮುರಿದ ಮಹಾಮಳೆ
ಕರ್ನಾಟಕ ರಾಜ್ಯಕ್ಕೆ ಜೂನ್ 5 ಕ್ಕೆ ಮುಂಗಾರು ಆಗಮನದ ನಿರೀಕ್ಷೆ ಇತ್ತು. ಆದರೆ ಮೇ 24ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಈಗ ಸಂಪೂರ್ಣ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. 2009 ರಲ್ಲಿ ಮೇ 23ಕ್ಕೆ ಕೇರಳ ಪ್ರವೇಶಿಸಿದ್ದ ಮುಂಗಾರು ಈ ಬಾರಿ ಮೇ 24ರಂದೇ ಪ್ರವೇಶ ಮಾಡಿದೆ. ಈ ಬಾರಿ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.