ಬ್ಲಾಕ್‌ಮೇಲ್ ಕೇಸ್: ಪ್ರೇಮಲತಾ ದಂಪತಿ ನಾರಾಯಣ್ ಶಾಸ್ತ್ರಿಗೆ ಕ್ಲೀನ್ ಚಿಟ್

ಬುಧವಾರ, 22 ಫೆಬ್ರವರಿ 2017 (16:03 IST)
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ಬ್ಲಾಕ್ ಮೇಲ್ ಕೇಸ್‍ನಲ್ಲಿ ಪ್ರೇಮಲತಾ ದಂಪತಿ ಮತ್ತು ನಾರಾಯಣಶಾಸ್ತ್ರಿಗೆ ಕೋರ್ಟ್ ಕ್ಲೀನ್ ಚಿಟ್ ನೀಡಿದೆ.
ಪ್ರೇಮಲತಾ ದಂಪತಿ ಮತ್ತು ನಾರಾಯಣಶಾಸ್ತ್ರಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿ ರಾಘವೇಶ್ವರ್ ಶ್ರೀಗಳು ದೂರು ದಾಖಲಿಸಿದ್ದರು. ದೂರಿನನ್ವಯ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಸಾಕ್ಷ್ಯಗಳ ಕೊರತೆಯೆಂದು ಹೊನ್ನಾವರ ಜೆಎಂಎಫ್‌ಸಿ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದರು.
 
ರಾಮಕಥಾ ಗಾಯಕಿ ಪ್ರೇಮಲತಾ, ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವ, ಒಂದು ದಿನದ ಮುಂಚೆಯೇ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣ ದುರದ್ದೇಶದಿಂದ ದಾಖಲಿಸಿದಂತೆ ಕಾಣುತ್ತದೆ. ಹೀಗಾಗಿ ಪ್ರಕರಣದಲ್ಲಿ ಯಾವುದೇ ಸತ್ಯಾಂಶ ಕಂಡುಬಂದಿಲ್ಲ ಎಂದು ಬಿ ರಿಪೋರ್ಟ್‌ನಲ್ಲಿ ಸಿಐಡಿ ಉಲ್ಲೇಖಿಸಿದೆ.
 
ಪ್ರೇಮಲತಾ ದಂಪತಿಗಳು ಮೂರು ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಹಣ ನೀಡದಿದ್ದಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆಯೊಡ್ಡಿದ್ದರು ಎಂದು ರಾಘವೇಶ್ವರ್ ಶ್ರೀಗಳು 2014ರಲ್ಲಿ ದೂರು ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ