ರಾಷ್ಟ್ರಪತಿ ಪ್ರಣಬ್ ಮುಖರ್ಜಿಯಿಂದ ನಮ್ಮ ಮೆಟ್ರೋ ಮೊದಲ ಹಂತ ಲೋಕಾರ್ಪಣೆ

ಶನಿವಾರ, 17 ಜೂನ್ 2017 (18:45 IST)
ವಿಧಾನಸೌಧದ ಆವರಣದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮೊದಲ ಹಂತದ ಮೆಟ್ರೋ ರೈಲಿಗೆ ಚಾಲನೆ ನೀಡಿದರು. 
 
ಕರ್ನಾಟಕ ಮತ್ತು ಕೇರಳದಲ್ಲಿ ಮೆಟ್ರೋ ಯೋಜನೆ ಪೂರ್ಣಗೊಂಡಿರುವುದಕ್ಕೆ ಸಂತಸವಾಗಿದೆ 2001 ನಲ್ಲಿ ಮೆಟ್ರೋ ಕಾಮಗಾರಿಯ ಡಿಪಿಆರ್‌ ಆಗಿತ್ತು. ಎರಡನೇ ಹಂತದ ಮೆಟ್ರೋ ಕಾಮಗಾರಿ ಶುರುವಾಗಿರುವುದು ಶ್ಲಾಘನೀಯ ಎಂದು ಕೇಂದ್ರ ಸಚಿವ ವೆಂಕಯ್ಯನಾಯ್ಡು ಹರ್ಷ ವ್ಯಕ್ತಪಡಿಸಿದರು.
 
ಕೆಲ ಕಾರಣಗಳಿಂದ ಮೊದಲ ಹಂತದ ಮೆಟ್ರೋ ಕಾಮಗಾರಿ ವಿಳಂಬವಾಗಿತ್ತು. ಆದಾಗ್ಯೂ ಅಧಿಕಾರಿಗಳ ನೈಪುಣ್ಯತೆಯಿಂದಾಗಿ ಮೊದಲ ಹಂತ ಮುಕ್ತಾಯಗೊಂಡಿದೆ ಎಂದರು.
 
ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲಾ, ನಗರಾಭಿವೃದ್ಧಿ ಖಾತೆ ಸಚಿವ ವೆಂಕಯ್ಯ ನಾಯ್ಡು, ಸದಾನಂದಗೌಡ, ಸಂಸದ ಪಿ.ಸಿ.ಮೋಹನ್ ಕೆ.ಜೆ.ಜಾರ್ಜ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ