ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ವಿಚಾರ; ಸಿಎಂ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕ

ಶನಿವಾರ, 5 ಜನವರಿ 2019 (12:42 IST)
ಬೆಂಗಳೂರು  : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕರೊಬ್ಬರು ಸಿಡಿದೆದ್ದಿದ್ದಾರೆ.


ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರು ಸಿಎಂ ಕುಮಾರಸ್ವಾಮಿ ಅವರಿಗೆ  ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ವಿಚಾರದ ಬಗ್ಗೆ ಇಂದು ಸಂಜೆಯೊಳಗೆ ನಿರ್ಧಾರ ಕೈಗೊಳ್ಳುವಂತೆ ಡೆಡ್ ಲೈನ್ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರು, ‘ಇಂದು ಸಂಜೆಯೊಳಗೆ ನಿರ್ಧಾರ ಕೈಗೊಳ್ಳದಿದ್ರೆ ಅಧ್ಯಕ್ಷ ಸ್ಥಾನ ಬೇಡ. ನಾವು ಭಿಕ್ಷೆ ಕೇಳ್ತಿಲ್ಲ. ಅಧ್ಯಕ್ಷ ಸ್ಥಾನ ಕೊಡಿ ಎಂದಿರಲಿಲ್ಲ. ನಮಗೆ ಸಿಎಂ ಕುಮಾರಸ್ವಾಮಿ ಭಿಕ್ಷೆ ಹಾಕುವುದು ಬೇಡ. ಸಂಜೆಯೊಳಗೆ ನಿರ್ಧಾರ ಕೈಗೊಳ್ಳದಿದ್ರೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಿಗೆ  ಪತ್ರ ಬರೆಯುತ್ತೇವೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡವೆಂದು ಹೇಳುತ್ತೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ