ಆರ್.ಅಶೋಕ ವಿರುದ್ಧದ ಪ್ರಕರಣಕ್ಕೆ ತಡೆ

ಗುರುವಾರ, 25 ಜನವರಿ 2018 (17:36 IST)

ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಆರ್.ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಬಗರ್ ಹುಕಂ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿ ಆರ್.ಅಶೋಕ್ ಅಕ್ರಮ ಎಸಗಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಆರೋಪಿಸಿತ್ತು.

ಆದರೆ, ಆರ್.ಅಶೋಕ್ ಅವರು ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಿದ್ದು, ರದ್ದುಪಡಿಸಬೇಕು ಎಂದು ಆಗ್ರಹಿಸಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ