ಈ ವೇಳೆ ಬಿಜೆಪಿ ಮುಖಂಡರಾದ ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಮೇಯರ್ ಮಂಜುನಾಥ ರೆಡ್ಡಿ ಸೇರಿದಂತೆ ಇನ್ನಿತರರೂ ಕೂಡ ಬರಮಾಡಿಕೊಂಡರು.
ಇನ್ನು ಪ್ರಧಾನಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ 23 ಪ್ರಮುಖ ರಸ್ತೆಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಖಾಸಗಿ ವಾಹಿನಗಳಿಗೆ ಪ್ರವೇಶ ನಿಷೇಧ ಹೇರಲಾಗಿದೆ. ಇದರ ಜೊತೆಗೆ ಸ್ಥಳೀಯ ಖಾಸಗಿ ವಾಹಿನಿಗಳಿಗೆ ವರದಿ ಮಾಡಲೂ ಕೂಡ ಅವಕಾಶ ನೀಡಲಾಗಿಲ್ಲ. ಪ್ರಧಾನಿ ಕಾರ್ಯಾಲಯದ ಸೂಚನೆ ಮೇರೆಗೆ ಕೇವಲ ರಾಷ್ಟ್ರೀಯ ಸುದ್ದಿವಾಹಿನಿಗಳಿಗೆ ಮಾತ್ರ ವರದಿ ಮಾಡಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.
ಇನ್ನು ಕನ್ನಡದ ಸುದ್ದಿವಾಹಿನಿಗಳಿಗೂ ಕೂಡ ಪಾಸ್ ನಿರಾಕರಿಸಲಾಗಿದ್ದು, ಪ್ರಧಾನಿ ಕಾರ್ಯಾಲಯದ ವರ್ತನೆಗೆ ಸ್ಥಳೀಯ ವಾಹಿನಿಗಳ ಮಾಧ್ಯಮ ಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ಬಾರಿಯೂ ಮೋದಿ ಕಾರ್ಯಕ್ರಮಕ್ಕೆ ಸ್ಥಳೀಯ ಮಾಧ್ಯಮಗಳಿಗೆ ಅನುಮತಿ ನೀಡದೆ ತಾರತಮ್ಯವೆಸಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.