ಶಾದಿಭಾಗ್ಯದ ಕಾಪಿ ಮಾಡಿದ ಪ್ರಧಾನಿ ಮೋದಿ ಸರಕಾರ: ಸಿಎಂ ಸಿದ್ದರಾಮಯ್ಯ

ಸೋಮವಾರ, 7 ಆಗಸ್ಟ್ 2017 (17:32 IST)
ಕೇಂದ್ರ ಸರಕಾರದ ಶಾದಿ ಶುಗುಣ್ ಯೋಜನೆ ರಾಜ್ಯದ ಶಾದಿಭಾಗ್ಯದ ಕಾಪಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಎಲ್ಲಾ ಸಮುದಾಯಗಳ ಏಳಿಗೆಯನ್ನು ಬಯಸುತ್ತದೆ. ಆದರೆ, ವಿಪಕ್ಷಗಳು ಅನಗತ್ಯವಾಗಿ ಸರಕಾರದ ವಿರುದ್ಧ ಆರೋಪ ಮಾಡುತ್ತವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 
 
ರಾಜ್ಯ ಸರಕಾರ ಹಿಂದೆ ಶಾದಿಭಾಗ್ಯ ಯೋಜನೆ ಜಾರಿ ಮಾಡಿದಾಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದರು. ಇದೀಗ ಏನು ಹೇಳ್ತಾರೆ ಅವರನ್ನೇ ಕೇಳಿ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯ ಸರಕಾರದ ಹಲವಾರು ಯೋಜನೆಗಳನ್ನು ಕೇಂದ್ರ ಸರಕಾರ ಕಾಪಿ ಮಾಡಿದೆ. ರಾಜ್ಯ ಸರಕಾರ ಅಲ್ಪ ಸಂಖ್ಯಾತರ ಪರವಾಗಿ ಯಾವುದೇ ಯೋಜನೆ ಜಾರಿಗೆ ತಂದರೂ ಬಿಜೆಪಿ ವಿರೋಧಿಸುತ್ತದೆ ಎಂದು ಲೇವಡಿ ಮಾಡಿದರು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ