ಪ್ರಧಾನಿ ಮಧ್ಯಸ್ಥಿಕೆಯಿಂದ ಮಾತ್ರ ಕಳಸಾ ಬಂಡೂರಿ ವಿವಾದ ಅಂತ್ಯ ಸಾಧ್ಯ

ಶುಕ್ರವಾರ, 28 ಆಗಸ್ಟ್ 2015 (21:24 IST)
ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆಯಿಂದ ಮಾತ್ರ ಕಳಸಾ ಬಂಡೂರಿ ವಿವಾದ ಅಂತ್ಯವಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರದಲ್ಲಿ ಕರೆಯುವಂತೆ ಪ್ರಧಾನಿಯವರಿಗೆ ಮನವಿ ಮಾಡಲಾಗಿದೆ. ಪ್ರಧಾನ ಮಂತ್ರಿಗಳು ಮಧ್ಯಸ್ಥಿಕೆ ವಹಿಸಿದಲ್ಲಿ ಯೋಜನೆ ಸಮರ್ಪಕವಾಗಿ ಜಾರಿಯಾಗಲು ಸಾಧ್ಯ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷ ಕಳಸಾ ಬಂಡೂರಿ ಯೋಜನೆ ಜಾರಿಗೆ ಬದ್ಧವಾಗಿದೆ. ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಕಾಂಗ್ರೆಸ್ ಮುಖಂಡರಿಗೆ ಮನವಿ ಮಾಡಲು ಸರಕಾರ ಬದ್ಧವಾಗಿದೆ. ಇದರಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
 
ರಾಜ್ಯದ ಕೇಂದ್ರ ಸಚಿವರು ಪ್ರಧಾನಮಂತ್ರಿಯವರ ಮೇಲೆ ಒತ್ತಡ ತಂದಲ್ಲಿ ಕಳಸಾ ಬಂಡೂರಿ ಯೋಜನೆ ಜಾರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ