ಯುವಕನ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿ

ಶನಿವಾರ, 1 ಜೂನ್ 2019 (12:03 IST)
ರಾಯಚೂರು : ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡುವಂತೆ ಯುವಕನೊರ್ವ ಮಾಡಿದ ಮನವಿಗೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಂದಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಲಿಂಗಸುಗೂರಿನ ಗಲಗಿನ ದೊಡ್ಡಿ, ಕಾಳಪ್ಪನ ದೊಡ್ಡಿ ಹಾಗೂ ಗುಳೆದರ ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ನೀಡುವಂತೆ ದೇವರಬುಪೂರು ಗ್ರಾಮದ ಯುವಕ ಅಮರೇಶ್ 2018 ಸೆಪ್ಟೆಂಬರ್ 15 ರಂದು ಪ್ರಧಾನ ಮಂತ್ರಿ ಕಚೇರಿ ಟ್ವೀಟರ್ ಅಕೌಂಟ್ ಗೆ ಟ್ವೀಟ್ ಮಾಡಿದ್ದರು.


ಯುವಕನ ಟ್ವೀಟ್‍ ಗೆ ಸ್ಪಂದಿಸಿದ ಪ್ರಧಾನಿ ಮೂರು ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ನೀಡುವಂತೆ ಆದೇಶ ನೀಡಿದ್ದು, ಈ ಬಗ್ಗೆ ಕೇಂದ್ರ ಗ್ರಾಮೀಣ ವಿದ್ಯುದ್ದೀಕರಣ ನಿಗಮ ಟ್ವೀಟ್ ಮಾಡಿತ್ತು. ಸದ್ಯ ಜೆಸ್ಕಾಂ ಇಲಾಖೆಯಿಂದ ವಿದ್ಯುತ್ ಸಂಪರ್ಕ ಕಾರ್ಯ ಆರಂಭಿಸಿದ್ದು, ಕೇಂದ್ರ ಸರಕಾರದ ಸೌಭಾಗ್ಯ ಯೋಜನೆ ಅಡಿಯಲ್ಲಿ ಮೀಟರ್ ಅಳವಡಿಕೆ ಕಾರ್ಯ ಆರಂಭವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ