ಸುಳ್ಳು ಪ್ರಚಾರದಲ್ಲಿ ಪ್ರಧಾನಿ ಮೋದಿಯದ್ದು ಎತ್ತಿದ ಕೈ: ಸಿಎಂ ಸಿದ್ದರಾಮಯ್ಯ

ಮಂಗಳವಾರ, 25 ಜುಲೈ 2017 (13:50 IST)
ಸುಳ್ಳು ಪ್ರಚಾರದಲ್ಲಿ ಪ್ರಧಾನಿ ಮೋದಿಯದ್ದು ಎತ್ತಿದ ಕೈ. ಆದರೆ, ನಾವು ಪ್ರಚಾರ ಮಾಡದೇ ಜನರ ಸೇವೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 
ರಾಜ್ಯದ 6.5 ಕೋಟಿ ಜನರಿಗೆ ಸರಕಾರ ಜಾರಿಗೊಳಿಸಿದ ಒಂದಲ್ಲ ಒಂದು ಯೋಜನೆ ತಲುಪುವಂತೆ ಜಾರಿಗೊಳಿಸಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ ಬಹುತೇಕ ಆಶ್ವಾಸನೆಗಳನ್ನು ಪೂರೈಸಿದ್ದೇವೆ. ಇನ್ನುಳಿದ ಆಶ್ವಾಸನೆಗಳನ್ನು ಮುಂಬರುವ ದಿನಗಳಲ್ಲಿ ಪೂರೈಸುತ್ತೇವೆ ಎಂದು ಭರವಸೆ ನೀಡಿದರು.   
 
ಜನಧನ ಖಾತೆ ತೆರೆಯಿರಿ 15 ಲಕ್ಷ ರೂಪಾಯಿ ಹಣ ನಿಮ್ಮ ಖಾತೆಗೆ ಬರುತ್ತೆ ಎಂದಿದ್ದರು ಪ್ರಧಾನಿ ಮೋದಿ. ಆದರೆ, ನಿಮ್ಮ ಖಾತೆಗೆ 15 ರೂಪಾಯಿ ಕೂಡಾ ಬರಲಿಲ್ಲ, ಇದು ಕೇವಲ ಪ್ರಚಾರಕ್ಕಾಗಿ ಮಾಡಿದ್ದು ಅನ್ನೋದು ನಿಮಗೆ ಗೊತ್ತು ಎಂದು ವ್ಯಂಗ್ಯವಾಡಿದರು.
 
ಪರಿಶಿಷ್ಠ ಜಾತಿಯವರಿಗೆ 27400 ಕೋಟಿ ರೂಪಾಯಿಗಳನ್ನು ಮೀಸಲಾಗಿರಿಸಿದ್ದೇವೆ. ಹಿಂದೆಂದೂ ವಿಪಕ್ಷಗಳು ಇಂತಹ ಮೊತ್ತವನ್ನು ಮೀಸಲಾಗಿಟ್ಟಿರಲಿಲ್ಲ. ಬಡವರ, ಶೋಷಿತರ, ದೀನ ದಲಿತರ ಏಳಿಗೆಯೇ ಕಾಂಗ್ರೆಸ್ ಪಕ್ಷದ ಮುಖ್ಯ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ