ದರ್ಶನ್ ಫೋಟೋ ಕುರಿತ ಪ್ರಲ್ಹಾದ್ ಜೋಶಿ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

Krishnaveni K

ಶನಿವಾರ, 7 ಸೆಪ್ಟಂಬರ್ 2024 (12:10 IST)
ಬೆಂಗಳೂರು: ನಟ ದರ್ಶನ್ ಹೇಳಿಕೆ ವೈರಲ್ ಮಾಡಿದ್ದೇ ರಾಜ್ಯ ಸರ್ಕಾರ ಎಂದು ಆರೋಪ ಮಾಡಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ರಾಜಾತಿಥ್ಯ ಪಡೆಯುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬಗ್ಗೆ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ತನ್ನ ಹಗರಣಗಳಿಂದ ಜನರ ಗಮನ ಬೇರೆ ಕಡೆ ಸೆಳೆಯಲು ಈ ಫೋಟೋಗಳನ್ನು ವೈರಲ್ ಮಾಡಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ  ವಿರುದ್ಧ ಮುಡಾ ಹಗರಣ ಭಾರೀ ಸದ್ದು ಮಾಡಿತ್ತು. ಇದರ ನಡುವೆಯೇ ದರ್ಶನ್ ಫೋಟೋ ವೈರಲ್ ಆಗಿದ್ದು ಇದರಿಂದ ಮುಡಾ ಹಗರಣ ವಿಚಾರ ಕೊಂಚ ಮಟ್ಟಿಗೆ ತಣ್ಣಗಾಗಿತ್ತು. ಈ ರೀತಿ ಮಾಡುವ ಉದ್ದೇಶದಿಂದಲೇ ರಾಜ್ಯ ಸರ್ಕಾರವೇ ಫೋಟೋ ವೈರಲ್ ಮಾಡಿದೆ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದರು.

ಅದಕ್ಕೆ ಇಂದು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಇಂತಹ ಬಾಲಿಶ ಹೇಳಿಕೆಗಳನ್ನು ನೀಡುವ  ಬದಲು ಜನರ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ ಎಂದಿದ್ದಾರೆ. ಫೋಟೋ ವೈರಲ್ ಆಗಿರುವುದರ ಹಿಂದೆ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದು ಅವರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ