ಯುಜಿಸಿ ನಿಯಮಗಳ ಪ್ರಕಾರ ಮೌಲ್ಯಮಾಪಕರು ರಕ್ತ ಸಂಬಂಧಿಗಳ ಉತ್ತರ ಪತ್ರಿಕೆಯನ್ನು ಮೌಲ್ಯಮಾಪನೆ ಮಾಡುವಂತಿಲ್ಲ. ಹೀಗೆ ಮಾಡುವುದರಿಂದ ತಾರತಮ್ಯವಾಗಬಹುದು ಮತ್ತು ಇತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಹುದು ಎಂಬುದು ಯುಜಿಸಿ ಕಾಳಜಿ. ಈ ನಿಯಮವನ್ನು ಉಲ್ಲಂಘಿಸಿರುವ ಧಾರವಾಡದ ಸಿದ್ಧಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕರಾಗಿರುವ ಶರತ್ ಬಾಬು ಎಲ್ಎಲ್ಎಮ್ ಅಭ್ಯಸಿಸುತ್ತಿರುವ ಮಗಳು ಬರೆದಿದ್ದ ಪರೀಕ್ಷೆಯ ಉತ್ತರ ಪತ್ರಿಕೆಯನನ್ನು ಮೌಲ್ಯಮಾಪನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.