ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ : ಸಚಿವರು ಹೀಗಾ ಹೇಳೋದು?

ಮಂಗಳವಾರ, 19 ಮೇ 2020 (19:59 IST)
ಲಾಕ್ ಡೌನ್ ಸಡಿಲಿಕೆಯಾದ ಸಂದರ್ಭದಲ್ಲಿ ಕೆಲವೊಂದು ಸಮಸ್ಯೆಗಳು ಉದ್ಬವಿಸುತ್ತವೆ. ಅವೆಲ್ಲವನ್ನೂ ಸರ್ಕಾರ ಸಮರ್ಥವಾಗಿ ನಿಭಾಯಿಸುವ ಕಾರ್ಯವನ್ನು ಮಾಡಲಿದೆ.

ಹೀಗಂತ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕೊರೊನಾ ಯೋಧರಿಗೆ ಗೌರವ ಸನ್ಮಾನ ಹಾಗೂ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೊರೊನಾ ವೈರಸ್ ನಿಯಂತ್ರಣಕ್ಕೆ ಎಲ್ಲರೂ ಎಚ್ಚರಿಕೆ ವಹಿಸಿಕೊಂಡು ಕೆಲಸ ಮಾಡೋಣ. ಎಲ್ಲಿಯಾದರೂ ಲೋಪ ದೋಷಗಳಾಗಿದ್ದರೆ ಸರಿಪಡಿಸಿಕೊಂಡು ಹೋಗೋಣ‌ ಎಂದರು.

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಜಗದೀಶ್ ಶೆಟ್ಟರ್, ಅದರ ಬಗ್ಗೆ ಇನ್ನೂ ಕೂಡ ಎಲ್ಲಿಯೂ ಚರ್ಚೆಯಾಗಿಲ್ಲ. ಸದ್ಯಕ್ಕೆ ಅದರ ಬಗ್ಗೆ ಹೆಚ್ಚು ಏನು ಹೇಳುವುದಿಲ್ಲ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ