ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದವರ ರಕ್ಷಣೆ

ಮಂಗಳವಾರ, 16 ಆಗಸ್ಟ್ 2022 (19:12 IST)
ಕಾಶ್ಮೀರ ಕಥುವಾ ಜಿಲ್ಲೆಯ ಉಜ್ ನದಿಯ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರನ್ನು ಭಾರತೀಯ ವಾಯುಪಡೆ ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಸಂಜೆ ಇಬ್ಬರು ವ್ಯಕ್ತಿಗಳು ಮತ್ತು 12ಕ್ಕೂ ಹೆಚ್ಚು ಪ್ರಾಣಿಗಳು ನದಿಯಲ್ಲಿ ಸಿಲುಕಿರುವ ಬಗ್ಗೆ ಮಾಹಿತಿ ಪಡೆದ ನಂತರ ಸೇನೆ ಮತ್ತು ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿತ್ತು. ಸ್ಥಳೀಯ ಆಡಳಿತವು ಐಎಎಫ್ ಹೆಲಿಕಾಪ್ಟರ್‌ಗಳಿಗೆ ಕರೆ ನೀಡಿತು. ಅವರು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಪ್ರಾರಂಭಿಸಿ ಇಬ್ಬರನ್ನು ರಕ್ಷಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ