ಕರ್ಮಕಾಂಡ ಬಯಲಿಗೆಳೆದ ಡಿಐಜಿ ರೂಪಾ ವಿರುದ್ಧವೇ ಪ್ರತಿಭಟನೆ ಜೋರು
ಇನ್ನೊಂದೆಡೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿಐಜಿ ರೂಪಾ ಅವರಿಗೆ ಮಾಹಿತಿ ನೀಡಿದ್ದ ಶಂಕಿತ ಖೈದಿಗಳನ್ನು ರಾತ್ರೋ ರಾತ್ರಿ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಸರ್ಕಾರ ನೇಮಿಸಿದ ತನಿಖಾ ತಂಡ ಬರುವ ಮೊದಲೇ ಸಾಕ್ಷ್ಯ ನಾಶಕ್ಕಾಗಿ ಎಲ್ಲಾ ರೀತಿಯ ತೆರೆ ಮರೆಯ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.