ಇಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಸರ್ಕಾರದಲ್ಲಿ ಕೆಲ ಕಳಂಕಿತ ಸಚಿವರಿದ್ದು, ಅವರ ಬಗ್ಗೆ ಚರ್ಚಿಸಲು ಅವಕಾಶ ನೀಡಿ ಎಂದು ಪಟ್ಟು ಹಿಡಿದ ವಿರೋಧ ಪಕ್ಷಗಳ ಸದಸ್ಯರ ಒತ್ತಾಯವನ್ನು ಸಭಾಧ್ಯಕ್ಳ ಕಾಗೋಡು ತಿಮ್ಮಪ್ಪ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆಗಿಳಿದ ಸನ್ನಿವೇಶ ಕಂಡು ಬಂತು.
ಕಲಾಪ ನಡೆಯುತ್ತಿದ್ದ ವೇಳೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿಯ ಎಲ್ಲಾ ಸದಸ್ಯರು, ಸಂಪುಟದಲ್ಲಿ ಕೆಲ ಕಳಂಕಿತ ಸಚಿವರಿದ್ದು, ಅವರ ಬಗ್ಗೆ ಚರ್ಚಿಸಲು ಅವಕಾಶ ನೀಡಿ ಎಂದು ಪಟ್ಟು ಹಿಡಿದಿದ್ದರು. ಆದರೆ ಸಚಿವರ ವಿರುದ್ಧದ ದೂರುಗಳು ಈಗಾಗಲೇ ನ್ಯಾಯಾಲಯದಲ್ಲಿ ಇರುವುದರಿಂದ ಚರ್ಚೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅನುಮತಿ ನೀಡದೇ ನಿರಾಕರಿಸಿದರು.