ರಾಮಲಿಂಗರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಬಲಿಗರಿಂದ ಪ್ರತಿಭಟನೆ

ಬುಧವಾರ, 26 ಡಿಸೆಂಬರ್ 2018 (13:54 IST)
ಬೆಂಗಳೂರು : ಶಾಸಕ ರಾಮಲಿಂಗರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದು, ಈ ಹಿನ್ನಲೆಯಲ್ಲಿ ರಾಮಲಿಂಗರೆಡ್ಡಿ ಬೆಂಬಲಿಗರು ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ನೇತೃತ್ವದಲ್ಲಿ ಗೆಸ್ಟ್ ಹೌಸ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

 

ರಾಮಲಿಂಗ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಲಾಗಿದೆ. ಆಗಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ