ಇದೇ ವೇಳೆ, ಸರ್ಕಾರ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನಕ್ಕೆ ನಿರ್ದೇಶನ ನೀಡುತ್ತಿದ್ದು, ಶುಲ್ಕ ಮಾತ್ರ ಗಗನಕ್ಕೇರಿದೆ. ಇದು ಬಡ ವಿದ್ಯಾರ್ಥಿಗಳಿಗೆ ಭರಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಶುಲ್ಕದಲ್ಲಿ ಮೊದಲು ವಿನಾಯಿತಿ ಘೋಷಿಸಲಿ ಎಂದ ಅವರು, ಮುಖ್ಯಮಂತ್ರಿಗಳು ನಾನೂ ಅಹಿಂದ ವರ್ಗಕ್ಕೆ ಸೇರಿದವನಾಗಿದ್ದು, ನಮ್ಮ ಸರ್ಕಾರ ಅಹಿಂದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದು ಪದೇ ಪದೇ ಹೇಳುತ್ತಿರುತ್ತಾರೆ. ಆದರೆ ಈ ಪ್ರಕರಣದಲ್ಲಿ ದಲಿತರಿಗೇ ಹೆಚ್ಚಿನ ಪೆಟ್ಟು ಬಿದ್ದಿದೆ. ಇದನ್ನು ಸಿದ್ದರಾಮಯ್ಯನವರು ಸ್ಮರಿಸಿಕೊಳ್ಳಲಿ ಎಂದರು.