ಬಿಜೆಪಿ ಕಾರ್ಯಕಾರಿಣಿಗೆ ಪ್ರತಿಭಟನೆ ಬಿಸಿ

ಶನಿವಾರ, 16 ಏಪ್ರಿಲ್ 2022 (16:43 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಕಾಂಗ್ರೆಸ್‌ ಪ್ರತಿಭಟನೆಯ ಬಿಸಿ ತಟ್ಟಿದೆ. ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್​​​ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ವೇಳೆಯೇ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಹಿನ್ನೆಲೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಜನಾಂದೋಲನ & K.S.ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್​​​ ಹೋರಾ​ಟಕ್ಕಿಳಿದಿದ್ದು, 9 ತಂಡ ರಚನೆ ಮಾಡಲಾಗಿದೆ.  ಸಿದ್ದರಾಮಯ್ಯ, ಡಿಕೆಶಿ, ಬಿ.ಕೆ.ಹರಿಪ್ರಸಾದ್, ಎಂ .ಬಿ.ಪಾಟೀ ಲ್ ಸೇರಿ ಹಿರಿಯ ನಾಯಕರ ತಂಡ ರಚನೆಯಾಗಿದೆ. ಎಲ್ಲಾ ಜಿಲ್ಲೆಗಳು, ತಾಲೂಕುಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇಂದಿನಿಂದ 5 ದಿನಗಳ ಕಾಲ 9 ತಂಡಗಳಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ