ಪಾಠ ಮಾಡುತ್ತಲೇ ಕೊನೆಯುಸಿರೆಳೆದಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ, ಖ್ಯಾತ ವಿಜ್ಞಾನಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಅಸುನೀಗಿದ್ದ ಹಿನ್ನೆಲೆಯಲ್ಲಿ ರಾಜ್ಯದ ಶಿವಮೊಗ್ಗ, ದಾವಣೆಗೆರೆ, ಯಾದಗಿರಿ ಹಾಗೂ ಧಾರವಾಡ ಸೇರಿದಂತೆ ಇತರೆಡೆ ಸಾರ್ವಜನಿಕರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಹೌದು, ದೇಶದ ಮಕ್ಕಳ ಮುದ್ದಿನ ತಾತ, ಪ್ರತಿಷ್ಠಿತ, ಅಪರಿಮಿತ, ಅಸಮಾನ್ಯ ವಿಜ್ಞಾನಿ, ಉತ್ತಮ ಜನನಾಯಕ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ನಿನ್ನೆ ಮೆಘಾಲಯದ ಶಿಲ್ಲಾಂಗ್ನ ಐಐಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದ ವೇಳೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದ ಕಲಾಂ ನಿನ್ನೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಅವರನ್ನು ವಿವಿಧ ರೀತಿಯಾಗಿ ಸ್ಮರಿಸಿಕೊಳ್ಳುವ ಮೂಲಕ ನಮನ ಸಲ್ಲಿಸಲಾಗುತ್ತಿದೆ.