ಪಿಯುಸಿ ಪ್ರವೇಶ : ಅರ್ಜಿ ಆಹ್ವಾನಕ್ಕೆ ಸರಕಾರ ಸೂಚನೆ

ಭಾನುವಾರ, 19 ಜುಲೈ 2020 (21:50 IST)
ಮುರಾರ್ಜಿ ದೇಸಾಯಿ ವಸತಿ  ಕಾಲೇಜುಗಳ ಪಿಯುಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಹೆಚ್ಚಳವಾಗಿದೆ.
ವಸತಿ ಕಾಲೇಜುಗಳ   ಪ್ರವೇಶಕ್ಕೆ ಕೇಂದ್ರೀಕೃತ ಆನ್ ಲೈನ್ ಅರ್ಜಿ ಆಹ್ವಾನಿಸಿ  ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.

ಸಮಾಜ  ಕಲ್ಯಾಣ ಇಲಾಖೆ ವ್ಯಾಪ್ತಿಯ 66  ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ವಿದ್ಯಾರ್ಥಿಗಳು ಶೇ. 86.4 ರಷ್ಟು ವಿದ್ಯಾರ್ಥಿಗಳು  ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.  ಅವರಲ್ಲಿ ಶೇ. 75.3 ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್‍ನಲ್ಲಿ ಉತ್ತೀರ್ಣರಾಗಿದ್ದಾರೆ. 1809 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತ ಮತ್ತಿತರ ಪ್ರಮುಖ ವಿಷಯಗಳಲ್ಲಿ 72 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ. 11 ಕಾಲೇಜುಗಳಲ್ಲಿ ಶೇ. 100 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದಿದ್ದಾರೆ.

ವಸತಿ ಕಾಲೇಜುಗಳ ಫಲಿತಾಂಶವು  ರಾಜ್ಯದ ಒಟ್ಟಾರೆ ಪಿಯುಸಿ ಫಲಿತಾಂಶಕ್ಕಿಂತ ಶೇ. 25. ರಷ್ಟು ಹೆಚ್ಚಳವಾಗಿದೆ.  ಪ್ರಥಮ ಪಿಯುಸಿ ಆರಂಭದಿಂದಲೇ ಸಿಇಟಿ/ ನೀಟ್/ಜೆಇಇ ಮತ್ತಿತರ ಪರೀಕ್ಷೆಗಳಿಗೆ ಡಿಜಿಟಲ್ ಆಧಾರಿತ ತರಬೇತಿ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ