ಪುನೀತ್ ಪುತ್ರಿ ಸಂಜೆ ವೇಳೆ ಆಗಮನ

ಶನಿವಾರ, 30 ಅಕ್ಟೋಬರ್ 2021 (13:44 IST)
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಿರಿಯ ಪುತ್ರಿ ದೃತಿ ಅವರು ಕೆಲವೇ ಕ್ಷಣಗಳ ಹಿಂದೆ ನವದೆಹಲಿಗೆ ಬಂದಿಳಿದರು.
ಅಮೆರಿಕಾದಿಂದ ಪ್ರಯಾಣಿಸಿದ್ದ ಅವರು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದಾರೆ.
 
ಸಂಜೆ 4-15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿರುವ ದ್ರಿತಿ ನೇರವಾಗಿ ಅಲ್ಲಿಂದ ಕಂಠೀರವ ಸ್ಟುಡಿಯೋಗೆ ತೆರಳಲಿದ್ದು, ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
 
ಈ ಮಧ್ಯೆ ಮಧ್ಯಾಹ್ನ ಮೂರು ಗಂಟೆಗೆ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಮೆರವಣಿಗೆಗೆ ಸಿದ್ಧತೆ ನಡೆಸಲಾಗಿದೆ. ಕಂಠೀವರ ಸ್ಟೇಡಿಯಂ ನಿಂದ ಕಾರ್ಪೋರೇಷನ್, ಬಸವೇಶ್ವರ ಸರ್ಕಲ್, ವಿಂಡ್ಸರ್ ಮ್ಯಾನರ್, ಸಾಂಕ್ಯ ಕೆರೆ, ಸರ್ಕಲ್ ಮಾರಪ್ಪ ದೇವಾಲಯ, ಯಶವಂತಪುರ ಮತ್ತು ಗೊರಗುಂಟೆ ಪಾಳ್ಯ ಮಾರ್ಗವಾಗಿ ಕಂಠೀವರ ಸ್ಟೇಡಿಯಂಗೆ ಪಾರ್ಥಿವ ಶರೀರ ತಲುಪಲಿದ್ದು, ಸಂಜೆ ಅಂತ್ಯ ಸಂಸ್ಕಾರ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ