ಈ ಶಾಸಕರನ್ನು ಸಂಪರ್ಕಿಸಿದವರಿಗೆ ಕ್ವಾರಂಟೈನ್

ಸೋಮವಾರ, 13 ಜುಲೈ 2020 (15:12 IST)
ಶಾಸಕರೊಬ್ಬರು ಕೊರೊನ ವೈರಸ್ ಪೀಡಿತರಾಗಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ.  

ಹುಬ್ಬಳ್ಳಿ - ಧಾರವಾಡ ಪೂರ್ವ ಶಾಸಕ ಪ್ರಸಾದ ಅಬ್ಬಯ್ಯ ಕೊರೊನಾ ವೈರಸ್ ಪೀಡಿತರಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಕುಟುಂಬ ಸದಸ್ಯರು ಸೇರಿ 16 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಇನ್ನೂ ಕೆಲವರು ಸ್ವಯಂಪ್ರೇರಿತರಾಗಿ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ. ಎಲ್ಲರೂ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಕೆಲವರ ವರದಿಗಳು ನೆಗೆಟಿವ್ ಬಂದಿವೆ. ಇನ್ನೂ ಕೆಲವರ ವೈದ್ಯಕೀಯ ವರದಿಗಳು ಬರಬೇಕಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ