ನಂದಿನಿ ಲೇ ಔಟ್ ನಿವಾಸಿಯಾಗಿದ್ದ ಶಿವಕುಮಾರ್ ಮನೆಗೆ ಬೀಗ ಹಾಕಿ ಮಾರ್ಚ್ 31 ರಿಂದ ತಲೆ ಮರೆಸಿಕೊಂಡಿದ್ದ. ಬನ್ನೇರುಘಟ್ಟ ರಸ್ತೆಯ ಗಾರೆಬಾವಿ ಪಾಳ್ಯದ ಪಾಳು ಮನೆಯೊಂದರಲ್ಲಿ ಅವಿತುಕೊಂಡಿದ್ದ ಶಿವಕುಮಾರ್ ಸ್ವಾಮಿ ಜೊತೆ ಮೂವರು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಸೋಮವಾರ ರಾತ್ರಿ 10.30ರ ವೇಳೆಗೆ ಬಂಧಿಸಿದ್ದಾರೆ. ಎಸ್ಪಿ ಸಿರಿಗೌರಿ ಹಾಗೂ 40 ಸಿಬ್ಬಂದಿ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.