ಆರ್.ಅಶೋಕ್ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ:
ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಸಂಪೂರ್ಣ ವಿಫಲಾವಾಗಿರುವ ಸಿಎಂ @siddaramaiah ಹಾಗೂ ಡಿಸಿಎಂ @DKShivakumar
ಇಷ್ಟೆಲ್ಲಾ ಗೊಂದಲಗಳಿಂದ ನೀರಿಲ್ಲದೆ ಬೆಂಗಳೂರಿನ ಜನತೆ ಪರದಾಡುತ್ತಿದ್ದರೆ @INCKarnataka
ಸರ್ಕಾರ ಏನೂ ಆಗಿಲ್ಲವೆಂಬಂತೆ ಜಾಣ ಕುರುಡು ಪ್ರದರ್ಶನ ಮಾಡುತ್ತಿದ್ದು, ನೀರಿನ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ.
ಸರ್ಕಾರಕ್ಕೆ ನಿಜವಾಗಲೂ ನೀರಿನ ಸಮಸ್ಯೆ ಬಗೆಹರಿಸುವ ಬದ್ಧತೆ ಇದ್ದರೆ ನೊಂದಣಿ ಮಾಡಿಕೊಳ್ಳದ, ಸರ್ಕಾರದ ನಿಯಮ ಪಾಲಿಸದ ಟ್ಯಾಂಕರ್ ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ವಾರ್ಡ್ ಗಳಲ್ಲೂ ಮಾರ್ಷಲ್ ಗಳನ್ನು ನೇಮಿಸಿ ಟ್ಯಾಂಕರ್ ಗಳ ಮೇಲೆ ನಿಗಾ ಇಡಬೇಕು.
ಈಗಿರುವ ಸಹಾಯವಾಣಿ ಜನರಿಗೆ ಸ್ಪಂದಿಸಲು ವಿಫಲವಾಗಿದ್ದು, ಸರ್ಕಾರ ಖಾಸಗಿ ಸಂಸ್ಥೆಗಳ ಸಹಾಯದಿಂದ ಒಂದು ವಾರ್ಡ್ ಗೆ ಒಂದರಂತೆ ಕನಿಷ್ಠ 200 ದೂರವಾಣಿ ಲೈನ್ ಗಳ ಸಂಪರ್ಕ ಹೊಂದಿರುವ ಕಾಲ್ ಸೆಂಟರ್ ತೆರೆದು ಜನರ ಬೇಡಿಕೆಗೆ ಸ್ಪಂದಿಸುವ ಕೆಲಸ ಮಾಡಬೇಕು. ಎಂದು ಬರೆದುಕೊಂಡಿದ್ದಾರೆ.