15 ದಿನದಲ್ಲಿ ಬಿಜೆಪಿ ಪ್ರಾಬ್ಲಂ ಎಲ್ಲಾ ಪರಿಹಾರ: ಆರ್ ಅಶೋಕ್
ಬಿಜೆಪಿ ಈಗ ಒಡೆದ ಮನೆಯಾಗಿದೆ. ಒಂದೆಡೆ ಬಿವೈ ವಿಜಯೇಂದ್ರ ಗುಂಪು, ಇನ್ನೊಂದೆಡೆ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮತ್ತೊಂದು ಗುಂಪು ತಟಸ್ಥವಾಗಿದೆ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕಿತ್ತೊಗೆಯಲೇಬೇಕು ಎಂದು ಯತ್ನಾಳ್ ಬಣ ಪಟ್ಟು ಹಿಡಿದಿದೆ.
ಈ ನಡುವೆ ರಾಜ್ಯ ಬಿಜೆಪಿ ಗೊಂದಲಗಳ ಬಗ್ಗೆ ಪ್ರತಿಕ್ರಿಯಿಸಿರುವ ಆರ್ ಅಶೋಕ್, ಎಲ್ಲಾ ಸಮಸ್ಯೆಗಳನ್ನೂ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ಅವರು ಎಲ್ಲವನ್ನೂ ಗಮನಿಸಿದ್ದಾರೆ. 15 ದಿನದಲ್ಲಿ ನಮ್ಮ ಎಲ್ಲಾ ಸಮಸ್ಯೆಗಳೂ ಪರಿಹಾರವಾಗುತ್ತದೆ ಎಂದು ಹೇಳಿದ್ದಾರೆ.