ಬಿಬಿಎಂಪಿ ಚುನಾವಣಾ ಉಸ್ತುವಾರಿ ಹೊತ್ತಿದ್ದ ಬಿಜೆಪಿ ಶಾಸಕ, ಮಾಜಿ ಡಿಸಿಎಂ ಆರ್.ಅಶೋಕ್ ಅವರ ನೇತೃತ್ವದಲ್ಲಿ ಈ ಮೌನ ಮೆರವಣಿಗೆಯ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಸುಬ್ಬಣ್ಣ, ಶಾಸಕ ಎಸ್.ರಘು, ನಗರದ ಇತರೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ನೂತನವಾಗಿ ಆಯ್ಕೆಯಾಗಿರುವ ಕಾರ್ಪೊರೇಟರ್ಗಳು ಭಾಗಿಯಾಗಿದ್ದು, ಬಾಯಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಈ ಹಿಂದೆ ಪ್ರತಿಕ್ರಿಯಿಸಿದ್ದ ಆರ್.ಅಶೋಕ್ ಅವರು, ಕಾಂಗ್ರೆಸ್ನ ಅಪವಿತ್ರ ಮೈತ್ರಿ ವಿರುದ್ಧ ಇಂದಿನಿಂದ ನಿರಂತರವಾಗಿ 5 ದಿನಗಳ ಕಾಲ ಪ್ರತಿಭಟನೆ ನಡೆಸಲಾಗುವುದು ಎಂದಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆಯೂ ಕೂಡ ನಗರದ ಟೌನ್ ಹಾಲ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಇಂದು ಬಿಬಿಎಂಪಿ ಕಚೇರಿಯಲ್ಲಿ ನಡೆಸಲಾಗುತ್ತಿದ್ದು, ಇದು ಪಕ್ಷದ ಎರಡನೇ ದಿನದ ಪ್ರತಿಭಟನೆಯಾಗಿದೆ.