ಎಚ್ ಡಿ ರೇವಣ್ಣ ವಿರುದ್ಧ ಕಠಿಣ ಕ್ರಮ ಜರುಗಿಸಲಿ: ಆರ್‌ ಅಶೋಕ್

Sampriya

ಭಾನುವಾರ, 5 ಮೇ 2024 (15:59 IST)
ಬೆಂಗಳೂರು: ಮಾಜಿ ಸಚಿವ, ಶಾಸಕ ಹೆಚ್‌.ಡಿ.ರೇವಣ್ಣ ಅವರನ್ನು ಬಂಧಿಸಿದ್ದು ಸರಿಯಾಗಿದೆ. ಇನ್ನು ನಮ್ಮ ಹೊಂದಾಣಿಕೆಯಲ್ಲಿ ಪ್ರಜ್ವಲ್ ರೇವಣ್ಣ ಇನ್ನೂ ಗೆದ್ದಿಲ್ಲ. ಗೆದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅವರು, ಮಾಜಿ ಸಚಿವ ಹೆಚ್‌.ಡಿ.ರೇವಣ್ಣರನ್ನು ಬಂಧಿಸಿದ್ದು ಸರಿಯಾಗಿದೆ. ಪೊಲೀಸರ ಕಾರ್ಯಕ್ಕೆ ನಾನು ಶ್ಲಾಘಿಸುತ್ತೇನೆ. ಬಂಧಿತ ಎಚ್‌.ಡಿ.ರೇವಣ್ಣ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಜತೆ ಹೊಸದಾಗಿ ನಮ್ಮ ಮೈತ್ರಿಯಾಗಿ ಈ ನಿಟ್ಟಿನಲ್ಲಿ ಪ್ರಜ್ವಲ್‌ಗೆ ಟಿಕೆಟ್ ನೀಡಲಾಗಿದೆ. ಜೆಡಿಎಸ್ ಪಕ್ಷದಿಂದ ಈಗಾಗಲೇ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಪ್ರಜ್ವಲ್ ಗೆದ್ದ ಮೇಲೆ ಜೆಡಿಎಸ್ ಸಂಸದ ಆಗುತ್ತಾರಾ? ಅಥವಾ ಎನ್‌ಡಿಎ ಸಂಸದರಾಗುತ್ತಾರಾ ಎಂಬ ಗೊಂದಲ ಇದೆ. ಈ ಬಗ್ಗೆ ವರಿಷ್ಠರಿಂದ ಸ್ಪಷ್ಟನೆ ಪಡೆಯುತ್ತೇವೆ. ನಂತರ ನೋಡಿಕೊಂಡು ಪ್ರಜ್ವಲ್ ವಿರುದ್ಧ ಕ್ರಮದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ