ಇಂದು ರಾಜ್ಯಕ್ಕೆ ಅಮಿತ್​ ಶಾ ಎಂಟ್ರಿ

ಶುಕ್ರವಾರ, 21 ಏಪ್ರಿಲ್ 2023 (16:34 IST)
ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಕರ್ನಾಟಕ ಗೆಲ್ಲಲು ಬಿಜೆಪಿ ವರಿಷ್ಠರು ರಣತಂತ್ರ ರೂಪಿಸಿದ್ದು, ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ದೌಡಾಯಿಸುತ್ತಿದ್ದಾರೆ. ಇಂದು ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಕ್ಯ ಅಮಿತ್​ ಶಾ ರಾಜ್ಯಕ್ಕೆ ಎಂಟ್ರಿ ಕೊಡ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಅಮಿತ್‌ ಶಾ ಮಧ್ಯಾಹ್ನ 3.45 ರಿಂದ ಸಂಜೆ 5.15ರವೆರಗೂ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್​ಗೆ ಭೇಟಿ ನೀಡಲಿರುವ ಅಮಿತ್‌ ಶಾ, ರಾತ್ರಿ 7.35ರಿಂದ ಬಿಜೆಪಿ ನಾಯಕರ ಜೊತೆ ಮೀಟಿಂಗ್‌ ನಡೆಸಲಿದ್ದಾರೆ. ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಅಮಿತ್ ಶಾ ಇಂದು ಮತ್ತು ನಾಳೆ ರಾಜ್ಯದಲ್ಲಿ ವಾಸ್ತವ್ಯ ಹೂಡಲಿದ್ದು, ಚುನಾವಣ ರಣತಂತ್ರ ಹೆಣೆಯಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ